Karnataka

ಹಿಂದಿ ಭಾಷಾ ಗದ್ದಲ: ನಟ ಅಜಯ್ ದೇವಗನ್ ವಿರುದ್ಧ ಒಗ್ಗೂಡಿದ ಕರ್ನಾಟಕದ ರಾಜಕೀಯ ಪಕ್ಷಗಳು

ಬೆಂಗಳೂರು: ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಅವರ ನಡುವಿನ ಟ್ವಿಟ್ಟರ್ ಫೈಟ್ ಬಳಿಕ ಹಿಂದಿ ಭಾಷಾ ಕಿಡಿ ಹತ್ತಿಕೊಂಡಿದ್ದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಸುದೀಪ್ ಬೆಂಬಲಕ್ಕೆ ನಿಂತಿದ್ದು ಹಿಂದಿ ಕುರಿತ ಹೇಳಿಕೆಗೆ ಅಜಯ್ ದೇವ್ಗನ್ ವಿರುದ್ಧ ತೊಡೆ ತಟ್ಟಿದ್ದಾರೆ.

“ಭಾಷೆಗಳಿಂದಾಗಿ ನಮ್ಮ ರಾಜ್ಯಗಳು ರೂಪುಗೊಂಡವು. ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಸುದೀಪ್ ಅವರ ಹೇಳಿಕೆ ಸರಿಯಾಗಿದೆ ಮತ್ತು ಎಲ್ಲರೂ ಅದನ್ನು ಗೌರವಿಸಬೇಕು” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಸಿದ್ದರಾಮಯ್ಯ ಅವರು ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಸುದೀಪ್ ನಡುವಿನ ಟ್ವಿಟ್ಟರ್ ಸಂಭಾಷಣೆಗೆ ಪ್ರತಿಕ್ರಿಯಿಸಿದ ನಂತರ ಮುಖ್ಯಮಂತ್ರಿಯವರ ಹೇಳಿಕೆ ಬಂದಿದೆ. ಹಿಂದಿ ಎಂದಿಗೂ ಮತ್ತು ಎಂದಿಗೂ ಭಾರತದ ರಾಷ್ಟ್ರ ಭಾಷೆಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.

“ನಾನು ಕನ್ನಡಿಗನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ದೇಶದ ಭಾಷಾ ವೈವಿಧ್ಯತೆಯನ್ನು ಮೆಚ್ಚುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ. ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸವನ್ನು ಹೊಂದಿದೆ, ಅದರ ಜನರು ಹೆಮ್ಮೆಪಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಸುದೀಪ್ ಅವರ ಹೇಳಿಕೆಯಲ್ಲಿ ತಪ್ಪು ಹುಡುಕಲು ಏನೂ ಇಲ್ಲ ಎಂದು ಹೇಳಿದ್ದಾರೆ. ಹೆಚ್ಚಿನ ಜನಸಂಖ್ಯೆಯು ಹಿಂದಿಯನ್ನು ಮಾತನಾಡುವುದರಿಂದ ಅದು ರಾಷ್ಟ್ರೀಯ ಭಾಷೆಯಾಗುವುದಿಲ್ಲ. ಹೀಗಿರುವಾಗ ಅಜಯ್ ದೇವಗನ್ ಹೇಳಿಕೆಯಲ್ಲಿನ ಸತ್ಯವೇನು? ಡಬ್ಬಿಂಗ್ ಬೇಡ ಎಂದರೆ ಏನು?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Exit mobile version