HomeNationalನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗಾಂಧಿಗೆ ವಿಚಾರಣೆಗೆ ಕರೆದ ಜಾರಿ ನಿರ್ದೇಶನಾಲಯ; ದ್ವೇಷ ರಾಜಕಾರಣ...

ನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗಾಂಧಿಗೆ ವಿಚಾರಣೆಗೆ ಕರೆದ ಜಾರಿ ನಿರ್ದೇಶನಾಲಯ; ದ್ವೇಷ ರಾಜಕಾರಣ ಎಂದ ಕಾಂಗ್ರೆಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (ಇಡಿ) ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಹಾಗು ರಾಹುಲ್ ಗಾಂಧಿ ಅವರಿಗೆ ನೋಟೀಸ್ ಜಾರಿ ಮಾಡಿದ್ದು ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಆಡಳಿತಾರೂಢ ಬಿಜೆಪಿ ಮೇಲೆ ಹರಿಹಾಯ್ದಿದ್ದು ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಹೇಳಿದೆ.

ಮುಂದಿನ ಬುಧವಾರ ಜೂನ್ 8 ರಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ, ಪ್ರಕರಣಕ್ಕೆ ಸಂಬಂಧಿಸಿ ಸೋನಿಯಾ ಗಾಂಧಿ ಅವರು ಮರೆಮಾಚುವಂತಹುದು ಏನೂ ಇಲ್ಲ.ಹಾಗಾಗಿ ಜೂನ್ 8ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ನಿರ್ಧರಿಸಲಾಗಿದೆ. ನಾವು ಬಿಜೆಪಿ ಈ ಸೇಡಿನ ರಾಜಕೀಯಕ್ಕೆ ಹೆದರುವುದಿಲ್ಲ ಎಂದು ಹೇಳಿದರು.

ಸ್ವಾತಂತ್ರ್ಯ ಚಳವಳಿಯ ಧ್ವನಿಯಾಗಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ತಡೆಯಲು ಚುನಾವಣಾ ಆಯೋಗಕ್ಕೆ ಸಾಧ್ಯವಾಗುವುದಿಲ್ಲ ಅಥವಾ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಹೆದರಿಸಲು ಸಾಧ್ಯವಿಲ್ಲ. ನಾವು ಅಂತಹ ತಂತ್ರಗಳಿಗೆ ಹೆದರುವುದಿಲ್ಲ ಎಂದು ಸಿಂಘ್ವಿ ಕಿಡಿಕಾರಿದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments