HomeNationalಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿ ಆಸ್ಪತ್ರೆಗೆ ದಾಖಲು : ವಿಷಪ್ರಾಶನ ಶಂಕೆ !!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿ ಆಸ್ಪತ್ರೆಗೆ ದಾಖಲು : ವಿಷಪ್ರಾಶನ ಶಂಕೆ !!

ಕರಾಚಿ (ಪಾಕಿಸ್ತಾನ): ವರದಿಗಳ ಪ್ರಕಾರ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯ ಸುತ್ತಮುತ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತ ವ್ಯಕ್ತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದ್ದು ನಂತರ ಹಠಾತ್ ಅನಾರೋಗ್ಯದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ. ದಾವೂದ್ ಇಬ್ರಾಹಿಂ ಆಸ್ಪತ್ರೆಯ ಮಹಡಿಯಲ್ಲಿರುವ ಏಕೈಕ ರೋಗಿಯಾಗಿದ್ದು, ಆಸ್ಪತ್ರೆಯ ಆಡಳಿತ ಮತ್ತು ಅವನ ಹತ್ತಿರದ ಕುಟುಂಬಕ್ಕೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.

ದಾವೂದ್ ಇಬ್ರಾಹಿಂ ಕೈವಾಡದಲ್ಲಿ 1993 ರಲ್ಲಿ ಮುಂಬೈನಲ್ಲಿ ಸರಣಿ ಸ್ಫೋಟಗಳು ಸಂಭವಿಸಿದವು. ಈ ಸ್ಫೋಟದಲ್ಲಿ 250 ಕ್ಕೂ ಹೆಚ್ಚು ಅಮಾಯಕ ನಾಗರಿಕರು ಸಾವನ್ನಪ್ಪಿದರು ಮತ್ತು 750 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡರು. ದಾವೂದ್ ಇಬ್ರಾಹಿಂ ಮುಂಬೈನಲ್ಲಿ ನಡೆದ ಭೀಕರ ದಾಳಿಯ ಮಾಸ್ಟರ್ ಮೈಂಡ್ ಹಾಗು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದಾನೆ.

ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಮುಂಬೈ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments