
ಲಡಾಕ್: ಶುಕ್ರವಾರ ತುರ್ತುಕ್ ಸೆಕ್ಟರ್ನಲ್ಲಿ 26 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಲಡಾಖ್ನ ಶ್ಯೋಕ್ ನದಿಯ ಬಳಿ ಕಮರಿಗೆ ಉರುಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
26 ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್ನಿಂದ ಸಬ್ ಸೆಕ್ಟರ್ ಹನೀಫ್ ಸ್ಥಳಕ್ಕೆ ತೆರಳುತ್ತಿದ್ದಾಗ ಥೋಯಿಸ್ನಿಂದ ಸುಮಾರು 25 ಕಿಮೀ ದೂರದಲ್ಲಿ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 60 ಅಡಿ ಆಳಕ್ಕೆ ಉರುಳಿ ಶ್ಯೋಕ್ ನದಿಯಲ್ಲಿ ಬಿದ್ದು ಎಲ್ಲಾ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅಧಿಕೃತ ಮಾಹಿತಿ ಹೇಳಿದೆ.
ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ 19 ಸೈನಿಕರನ್ನು C-17 ಗ್ಲೋಬ್ಮಾಸ್ಟರ್ನಿಂದ ಚಂಡೀಗಢದ ಚಂಡಿಮಂದಿರ್ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.
ಲಡಾಖ್ನಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ. “ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.